ಬ್ರೇಕಿಂಗ್ ನ್ಯೂಸ್: ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು!! ಅರೆಸ್ಟ್ ಆಗ್ತಾರಾ ?

ಐಪಿಎಲ್ 2025ರ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಭೀಕರ ದಿಕ್ಕಿತನ ಇದೀಗ ವಿರಾಟ್ ಕೊಹ್ಲಿ ವಿರುದ್ಧ ಸಮಾಜ ಮಾಧ್ಯಮದಲ್ಲಿ ಭಾರೀ ಆಕ್ರೋಶ ಹುಟ್ಟಿಸಿದೆ. ಈ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದುರಂತದ ನಂತರ, #ArrestKohli ಎಂಬ ಹ್ಯಾಶ್ಟ್ಯಾಗ್ X (ಹಳೆಯ Twitter)ನಲ್ಲಿ ಟ್ರೆಂಡ್ ಆಗುತ್ತಿದೆ, ಜನರು ಕೋಹ್ಲಿ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ2.
ಜೂನ್ 4 ರಂದು ನಡೆದ ಈ ಘಟನೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಈ ಅವಘಡದಲ್ಲಿ ಕೊಹ್ಲಿಯ ಪಾತ್ರವಿಲ್ಲದಿದ್ದರೂ, ಒಂದು ರೀತಿಯಲ್ಲಿ ಕೊಹ್ಲಿ ಕೂಡ ಈ ದುರಂತಕ್ಕೆ ಕಾರಣ ಎಂಬುದು ಕೆಲವರ ಅಭಿಪ್ರಾಯ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಕೊಹ್ಲಿಯ ಬಂಧನಕ್ಕೆ ಒತ್ತಾಯ ಜೋರಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ #ArrestKohli ಟ್ರೆಂಡ್ ಆಗುತ್ತಿದೆ.
ಮೇಲೆ ಹೇಳಿದಂತೆ ವಿರಾಟ್ ಕೊಹ್ಲಿಯಿಂದಾಗಿ ಈ ಕಾಲ್ತುಳಿತ ಸಂಭವಿಸಿದೆ ಎಂಬುದು ಹಲವರ ಅಭಿಪ್ರಾಯವಾಗಿದೆ. ಹೀಗಾಗಿ ಕೊಹ್ಲಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಸಹ ಬಂಧಿಸಬೇಕು ಒಂದು ಒತ್ತಾಯಿಸಲಾಗುತ್ತಿದೆ. ಅವಘಡ ನಡೆದ ಮಾರನೇ ದಿನವೇ ವಿರಾಟ್ ಕೊಹ್ಲಿ ಮುಂಬೈಗೆ ಮರಳಿದರು. ಅದರ ಬದಲು ವಿರಾಟ್ ಕೊಹ್ಲಿ ಸಂತ್ರಸ್ಥರ ಕುಟುಂಬಗಳನ್ನು ಭೇಟಿ ಮಾಡಬೇಕಿತ್ತು. ಮೃತರ ಕುಟುಂಬಗಳಿಗೆ ನೆರವಾಗಬೇಕಿತ್ತು ಎಂಬುದು ಕೆಲವರ ವಾದವಾಗಿದೆ. ಹೀಗಾಗಿಯೇ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ #ArrestKohli ಅನ್ನು ಟ್ರೆಂಡ್ ಮಾಡುತ್ತಿದ್ದಾರೆ.
ಇದು ಮಾತ್ರವಲ್ಲದೆ ಈ ದುರಂತಕ್ಕೆ ವಿರಾಟ್ ಕೊಹ್ಲಿಯೂ ಕಾರಣರೆಂದು ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಆರೋಪ ಹೊರಿಸುತ್ತಿದ್ದು,ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಈಗಾಗಲೇ ಆರ್ಸಿಬಿ ವಿರುದ್ದ ದಾಖಲಾಗಿರುವ ಎಫ್ಐಆರ್ ಜೊತೆಗೆ ಕೊಹ್ಲಿ ವಿರುದ್ಧದ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.
ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇದಕ್ಕೂ ತಮಗೂ ಸಂಬಂಧವಿಲ್ಲ ಎಂಬಂತೆ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಬಂಧಿಸಿದೆ. ಆದರೆ ವಿರಾಟ್ ಕೊಹ್ಲಿ ಬಂಧನ ಏಕಿಲ್ಲ" ಎಂದು ಹಲವು ನೆಟ್ಟಿಗರು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ