ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಜಮೆಯಾಗಿಲ್ಲವೇ ? ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಜಮೆಯಾಗಿಲ್ಲವೇ ? ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ಪಡಿತರ ಚೀಟಿ ಸಕ್ರೀಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿಮೂಲಕ ಹಣ ವರ್ಗಾವಣೆ ಮಾಡಲಾಗಿದೆ.  ಹಣ ಜಮೆಯಾಗದೆ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20 ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ತಿಂಗಳಿನ ಅನ್ನಭಾಗ್ಯದ ಹಣ ಜಮೆಯಾಗುವುದಿಲ್ಲ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆ.ಜಿ. ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿರುತ್ತದೆ.

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನೀವು ಯಾವ ಜಿಲ್ಲೆಯವರೋ ಆ ಜಿಲ್ಲೆಯ ಮೇಲ್ಗಡೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೇರ ನಗದು ವರ್ಗಾವಣೆಯ ಸ್ಥಿತಿ Status of DBT ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ಆರ್.ಸಿ ನಂಬರ್ ಹಾಗೂ ಕ್ಯಾಪ್ಚ್ಯಾ ಕೋಡ್ ಹೋಕಿ ಗೋ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.

ಕಳೆದ ಮೂರು ತಿಂಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅತವಾ 1ಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲಾಗಿದೆ.

ಹಣ ಜಮೆಯಾಗದೆ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20 ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಮತ್ತು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಿದಲ್ಲಿ ಮಾತ್ರ ಮುಂದಿನ ತಿಂಗಳಿಂದ ಹಣ ಜಮೆಯಾಗುತ್ತದೆ. ಇದುವರೆಗೂ ಕುಟುಂಬದ ಮುಖ್ಯಸ್ಥರು ಸಕ್ರೀಯ ಬ್ಯಾಂಕ್ ಖಾತೆ ಹೊಂದಿಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆಯನ್ನು ತೆರೆದರೆ ಮುಂದಿನ ತಿಂಗಳ ಡಿಬಿಟಿಗೆ ಅರ್ಹರಾಗಿರುತ್ತಾರೆ. ಈಕಾರ್ಯವನ್ನು ಜುಲೈ 20 ರೊಳಗೆ ಮುಗಿಸಬೇಕು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟುಂಬದಲ್ಲಿ 4 ಸದಸ್ಯರಿದ್ದರೆ ಸದರು ಕುಟುಂಬವು 170 ರೂಪಾಯಿಗಳನ್ನು 5 ಸದಸ್ಯರನ್ನು ಹೊಂದಿರುವ ಕುಟುಂಬವು 510 ಹಾಗೂ 6 ಸದಸ್ಯರುಗಳನ್ನು ಹೊಂದಿರುವ ಕುಟುಂಬವು 850 ರೂಪಾಯಿಗಳನ್ನು ಪಡೆಯಲಿದ್ದಾರೆ.