ಕೊಡಿ ಶ್ರೀ ಸ್ಪೋಟಕ ಭವಿಷ್ಯ!! ಕರೋನಾ ಮತ್ತು ಯುದ್ಧದ ಬಗ್ಗೆ ಸ್ಪೋಟಕ ಮಾಹಿತಿ

ಕೊಡಿ ಶ್ರೀ ಸ್ಪೋಟಕ ಭವಿಷ್ಯ!! ಕರೋನಾ ಮತ್ತು ಯುದ್ಧದ ಬಗ್ಗೆ ಸ್ಪೋಟಕ ಮಾಹಿತಿ

ಪ್ರಸ್ತುತ, ಭಾರತವು ದೇಶಾದ್ಯಂತ 257 ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ. ಇತ್ತೀಚಿನ ತಿಂಗಳುಗಳಲ್ಲಿ ಕಂಡುಬರುವ ಅತ್ಯಂತ ಕಡಿಮೆ ಸಂಖ್ಯೆಗಳಿಗೆ ಹೋಲಿಸಿದರೆ ಈ ಏರಿಕೆ ಸಾಧಾರಣವಾಗಿದೆ ಆದರೆ ಗಮನಾರ್ಹವಾಗಿದೆ. ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರಗಳು ಹೆಚ್ಚು ಪರಿಣಾಮ ಬೀರುವ ರಾಜ್ಯಗಳಾಗಿವೆ, ಇವು ಒಟ್ಟಾಗಿ 85% ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿವೆ. ಕೇರಳವು 95 ಸಕ್ರಿಯ ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ತಮಿಳುನಾಡಿನಲ್ಲಿ 66 ಮತ್ತು ಮಹಾರಾಷ್ಟ್ರ 56 ಇವೆ.

ಹೊಸ ಅಥವಾ ಅಸ್ತಿತ್ವದಲ್ಲಿರುವ ಪ್ರಕರಣಗಳನ್ನು ವರದಿ ಮಾಡುವ ಇತರ ರಾಜ್ಯಗಳಲ್ಲಿ ದೆಹಲಿ (23), ಪುದುಚೇರಿ (10), ಕರ್ನಾಟಕ (13), ಗುಜರಾತ್ (7), ರಾಜಸ್ಥಾನ (2), ಹರಿಯಾಣ (1), ಸಿಕ್ಕಿಂ (1), ಮತ್ತು ಪಶ್ಚಿಮ ಬಂಗಾಳ (1) ಸೇರಿವೆ. ಮೇ 12 ರಿಂದ, ಭಾರತದಲ್ಲಿ 164 ಹೊಸ ಪ್ರಕರಣಗಳು ದಾಖಲಾಗಿವೆ, ಕೇರಳದಲ್ಲಿ 69 ಹೊಸ ಸೋಂಕುಗಳ ಅತಿದೊಡ್ಡ ಜಿಗಿತ ಕಂಡುಬಂದಿದೆ, ನಂತರ ಮಹಾರಾಷ್ಟ್ರ (44) ಮತ್ತು ತಮಿಳುನಾಡು (33) ಇವೆ.

ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ. ಮತ್ತೆ ಯುದ್ಧ ಭೀತಿ ಇದ್ದು ಕೆಲವು ದೇಶಗಳು ನಾಶವಾಗಲಿವೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊವಿಡ್ ಕುರಿತು ಕೂಡ ಮತ್ತೆ ಸ್ಪೋಟಕ‌ ಭವಿಷ್ಯ ನುಡಿದಿದ್ದಾರೆ. ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ ಎಂದು ಅವರು ಹೇಳಿದ್ದಾರೆ.


ಬೆಳವಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.
‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.