ಟ್ರಾಫಿಕ್ ಪೊಲೀಸ್ ರಿಗೆ ಬಿಸಿ ಮುಟ್ಟಿಸಿದ ಸರಕಾರ !! ಇಲ್ಲಿದೆ ನೋಡಿ ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ

ಟ್ರಾಫಿಕ್ ಪೊಲೀಸ್ ರಿಗೆ ಬಿಸಿ ಮುಟ್ಟಿಸಿದ ಸರಕಾರ !! ಇಲ್ಲಿದೆ ನೋಡಿ ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ

ಮಂಡ್ಯದಲ್ಲಿ ಮಗು ಸಾವು ಹಾಗೂ ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಕ್ಯಾಂಟರ್ ಚಾಲಕ ಡಿಕ್ಕಿ ಹೊಡೆದ ಪ್ರಕರಣವನ್ನು ಉಲ್ಲೇಖಿಸಿ ಆದೇಶ ಹೊರಡಿಸಿರುವ ಸಂಚಾರ ಪೊಲೀಸರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಅವರು ಖಡಕ್ ಸೂಚನೆ ನೀಡಿದ್ದಾರೆ.ಅವರು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸುವ ವೇಳೆ ರಸ್ತೆ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿರಿಸಿಕೊಳ್ಳುತ್ತಿಲ್ಲ. ಇದರಿಂದ ಸಾರ್ವಜನಿಕರ ಹಾಗೂ ಪೊಲೀಸರ ಜೀವಕ್ಕೆ ಕುತ್ತು ಉಂಟಾಗುತ್ತಿದೆ. ಹಾಗಾಗಿ ಅಧಿಕಾರಿ ಮತ್ತು ಸಿಬ್ಬಂದಿಗೆ ಕೆಲವು ನಿರ್ದೇಶನಗಳನ್ನು ಪಾಲಿಸುವಂತೆ ಹೇಳಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಕಂಡುಬಂದಾಗ ಮಾತ್ರವೇ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸಬೇಕು. ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳನ್ನು ತಡೆಯಬಾರದು. ರಸ್ತೆ ಮಧ್ಯೆ ದಿಢೀರ್ ಅಡ್ಡ ಬಂದು ವಾಹನ ನಿಲ್ಲಿಸುವಂತೆ ಹೇಳಬಾರದು ಹಾಗೂ ಬೈಕ್‌ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನದ ಕೀಲಿ ಕೈ ತೆಗೆದುಕೊಳ್ಳುವುದನ್ನು ಮಾಡಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಮಾರ್ಗಸೂಚಿಯಲ್ಲೇನಿದೆ?
⦁ ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು

⦁ ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಮಾತ್ರ ವಾಹನ ನಿಲ್ಲಿಸಬೇಕು

⦁ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಡೆಯಬಾರದು

⦁ ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು

⦁ ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು

ಸುರಕ್ಷತಾ ಸಾಧನಗಳ ಬಳಕೆ
⦁ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸು ವಾಗ ಅಥವಾ ವಾಹನಗಳ ತಪಾಸಣೆ ಮಾಡುವಾಗ ಪೊಲೀಸರು ರಿಪ್ಲೆಕ್ಟಿವ್ ಜಾಕೆಟ್ ಧರಿಸುವುದು. ವಾಹನ ತಪಾಸಣೆ ಸಂದರ್ಭ ಬಾಡಿವೋರ್ನ್ ಕೆಮರಾ ಧರಿಸಬೇಕು.


⦁ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಎಂಸಿ) ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ (ಐಟಿಎಂಎಸ್) ಹೊಂದಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕ ರಹಿತ ಪ್ರಕರಣಗಳನ್ನು ದಾಖಲಿಸಬೇಕು.

⦁ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.

⦁ ಹೆದ್ದಾರಿಗಳು ಹಾಗೂ ಇತರ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್ಟಿವಿಆರ್ ದಾಖಲಿಸಲು ತಂತ್ರಜ್ಞಾನ ಅನುಸರಿಸಬೇಕು.

⦁ ವಾಹನಗಳ ವೇಗ ತಗ್ಗಿಸಲು ತಪಾಸಣೆ ಸ್ಥಳದ 100ರಿಂದ 150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್ ಹಾಗೂ ಸುರಕ್ಷಾ ಸಲಕರಣೆ ಅಳವಡಿಸಿರಬೇಕು.

 ಈ ಹೊಸ ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ ಇಂದ ಪ್ರಯಾಣಿಕರು ಪೊಲೀಸ್ ಕಿರಿಕಿರಿ ಇಂದ ತಪ್ಪಿಸಿ ಕೊಳ್ಳುವ ಹಾಗಿದೆ . ಮತ್ತು ಜನರು ಯಾವುದೇ ಆತಂಕ ಇಲ್ಲಿದೆ ನೆಮ್ಮದಿ ಇಂದ  ರಸ್ತೆಗಲ್ಲಿ ಓಡಾಡ ಬಹುದಾಗಿದೆ . ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಹಾಗು ನಮ್ಮ ಪೇಜ್ ಲೈಕ್ ಮಾಡಿ