ಇವರ ಮನೆಗೆ ಮಾತ್ರ ಕರೆಂಟ್ ಫ್ರೀ ನಿಮ್ಮ ಮನೆಯ ಮೀಟರ್ ಬೋರ್ಡ್ ಚೆಕ್ ಮಾಡಿ

ಇವರ ಮನೆಗೆ ಮಾತ್ರ ಕರೆಂಟ್ ಫ್ರೀ ನಿಮ್ಮ ಮನೆಯ ಮೀಟರ್ ಬೋರ್ಡ್ ಚೆಕ್ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಪ್ರಚಾರ ಸಭೆಗಳಲ್ಲಿ ಮಾತನಾಡಿದ ಮಾದರಿಯಂತೆ ಉಚಿತ ವಿದ್ಯುತ್ ಬಗ್ಗೆ ತಾಲೂಕಿನ ಕೆರಗೋಡು ಗ್ರಾಮದ ವ್ಯಕ್ತಿಯೊಬ್ಬರು ಮಾಡಿರುವ ಟಿಕ್‌ಟಾಕ್ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.
 
ಇದರಿಂದ ವಿದ್ಯುತ್ ಬಿಲ್ ವಸೂಲಿಗೆ ಹೋದ ಸೆಸ್ಕ್‌ ಸಿಬ್ಬಂದಿ ಸಿದ್ದರಾಮಯ್ಯ ರೀತಿ ಡೈಲಾಗ್ ಹೊಡೆಯುವ ವ್ಯಕ್ತಿಯನ್ನು ಕಂಡು ಪೇಚಿಗೆ ಸಿಲುಕಿದ್ದಾರೆ. ಕರಂಟ್ ಬಿಲ್ ಕಟ್ಟಣ್ಣ ಎಂದು ಸೆಸ್ಕಾಂ ಸಿಬ್ಬಂದಿ ಕೇಳಿದರೆ, ಕರಂಟ್ ಬಿಲ್ ಕೇಳಿದರೆ ನಿಮ್ಮನ್ನೇ ಕಟ್ಟಿ ಹಾಕುತ್ತೇನೆ ಎಂದು ವ್ಯಕ್ತಿ ಬೆದರಿಕೆ ಹಾಕಿದ ಘಟನೆಯೂ ನಡೆದಿದೆ
 
ಹಾಗೆಯೆ ಕರಂಟ್ ಬಿಲ್ ಕಟ್ಟುವಂತೆ ಗ್ರಾಮದಲ್ಲಿ ಸೆಸ್ಕ್‌ ಸಿಬ್ಬಂದಿ ಹೋದರೆ, ಟಿಕ್‌ಟಾಕ್ ಮಾಡಿರುವ ವೀಡಿಯೋವನ್ನು ಗ್ರಾಮಸ್ಥರು ತೋರಿಸಿ ನಾವೂ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಯನ್ನೇ ತರಾಟೆಗೆ ತೆಗೆದುಕೊಂಡು ವಾಪಸ್ಸು ಕಳುಹಿಸುತ್ತಿರುವ ಘಟನೆಗಳೂ ಹಲವೆಡೆ ನಡೆದಿರುವ ಉದಾಹರಣೆಗಳು ಇವೆ. 
 
ಕರೆಂಟ್‌ ಬಿಲ್‌ ಕಟ್ಟಬೇಡಿ ಹಾಗೆಯೆ ಜನತೆ ಕಾಂಗ್ರೆಸ್‌ನ ಆಶ್ವಾಸನೆಯನ್ನು ನಂಬಿ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದು ಇಂದಿಗೆ 20 ದಿನ ಕಳೆದರೂ ಯಾವುದೇ ಯೋಜನೆಗಳ ಬಗ್ಗೆ ಮಾತುಗಳಿಲ್ಲ. ಕರೆಂಟ್ ಬಿಲ್ ನೀಡಲು ಬರುವ ಸಿಬ್ಬಂದಿ ಮೇಲೆ ಹಲ್ಲೆಗಳಾಗುತ್ತಿದೆ‌. ರಾಜ್ಯದ ಜನತೆ ಸರಿ ಇದ್ದಾರೆ. ಹಾಗಾಗಿ ಬಿಲ್ ಕಟ್ಟಬಾರದೆಂದು ನಾನು ಕರೆ ಕೊಡುತ್ತೇನೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.‌
 
ಉಚಿತ ಕರೆಂಟ್ ಅನ್ನು ಹೇಗೆ ಪಡೆಯುವುದು ಎಂದು ಈ ವೀಡಿಯೊದಲ್ಲಿ ನೀವು ನೋಡಬಹುದು: